ಬದುಕಿನ ಅನೇಕ ಮಜಲುಗಳಲ್ಲಿ
ಬದುಕುವ ಹಂಬಲದಲ್ಲಿರುವವನಿಗೆ
ಗೆಳತಿಯೋ, ಅಮ್ಮನೋ, ಹೆಂಡತಿಯೋ,
ಅಕ್ಕನೋ, ತಂಗಿಯೋ ಆಗಿ
ವಿಭಿನ್ನ ರೂಪಗಳಲ್ಲಿ ಜೊತೆಯಾಗಿ
ಹಸಿ ಹುಸಿ ನಗೆಗಳ ಲೆಕ್ಕಾಚಾರದಿಂದ
ಮೊದಲ್ಗೊಂಡು, ಬದುಕ ನೆಡೆಸುವಾಚೆಗಿನ
ಲೋಕದವರೆಗಿನ ಸುಖ ದು:ಖದ
ದಾರಿಯೊಳಗಣ ಸರಾಗವಾಗಿ
ಸಾಥ್ ಕೊಡುವ ನಿನಗೆ ಪದಗಳಲ್ಲಿ
ಹೇಳಲಾಗದಷ್ಟು ಹೆಚ್ಚಿನ ಪ್ರೀತಿಯಿಂದ
ಅಭಿನಂದನೆಗಳನ್ನು ಸಲ್ಲಿಸಲು
ಗೊತ್ತಿರುವ ಪದಗಳೂ ಸಾಲದಾಗಿದೆ ಇಂದು…
… ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯಗಳು
ಹಿತ್ತಲಲಿ ಕುಳಿತು ಮಂಗಳನ ಅಂಗಳ ನೋಡೋಣ್ವಾ?
ಹೌದು.. ಇವತ್ತು ಮಂಗಳನ ದರ್ಶನ ಸುಲಭ ಸಾಧ್ಯ… ಅವನು ಭೂಮಿಯ ಹತ್ತಿರಕ್ಕೆ ಸರಿಯುತ್ತಿದ್ದಾನೆ. ಮತ್ತೆ ಈ ಅವಕಾಶ ದೊರೆಯುವುದು ೨೦೧೪ ರಲ್ಲಿ. ಕೆಲತಿಂಗಳುಗಳಿಂದ ಪೂರ್ವದ ಕಡೆ ಮುಖ ಮಾಡಿ ನೋಡಿದೆಡೆ ಕೆಂಬಣ್ಣದ, ನಕ್ಷತ್ರದಂತೆ ಕಾಣುವ ಉದಯಿಸುತ್ತಿರುವ ಮಂಗಳನನ್ನು ಕಾಣಬಹುದಾಗಿದೆ.
ಇಂದು ರಾತ್ರಿ ಮಂಗಳ ಭೂಮಿಗೆ ೬೧ ಮಿಲಿಯನ್ ಮೈಲುಗಳಷ್ಟು ಬಳಿಸಾರಲಿದೆ, ಅಂದರೆ ೯೮ ಮಿಲಿಯನ್ ಕಿಲೋಮೀಟರುಗಳು. ಇಷ್ಟು ಸಾಕು, ಖಗೋಳಾಭ್ಯಾಸ ನೆಡೆಸುತ್ತಿರುವ ಹವ್ಯಾಸಿಗಳು ತಮ್ಮ ವಿಶೇಷ ಉಪಕರಣಗಳನ್ನು ಮಂಗಳನತ್ತ ತಿರುಗಿಸಿ ಅಲ್ಲಿನ ಮೇಲೈ ಬಗೆಗಿನ ವಿಷಯಗಳನ್ನು ಸೆರೆಹಿಡಿಯಲು.
ನೀರವ ರಾತ್ರಿಯ ಆ ದಿನ, ಸದ್ದೇ ಇಲ್ಲ. ಎಲ್ಲರೂ ನಿದ್ರಾದೇವಿಗೆ ಶರಣಾಗುತ್ತಾ ಶಾಂತರಾದಂತೆ ಕಾರು ಡ್ರೈ ಮಾಡಿ, ಕಾಡುಮೇಡು ಸುತ್ತಿ, ಬೆಟ್ಟ ಹತ್ತಿ ದಣಿದಿದ್ದ ನನ್ನ ದೇಹವೂ ಗೊತ್ತಿಲ್ಲದೇ ನಿಶ್ಚಲ ನಿದ್ರಾಸ್ಥಿತಿ ತಲುಪಿತ್ತು. ತಣ್ಣನೆ ಗಾಳಿ ಬೀಸುತ್ತಾ, ಹೊದ್ದಿಗೆ ಸರಿಯಾಗಿ ಕಾಲಿಗೆ ಹೊದ್ದಿದೆಯೇ ಎಂದು ಪರೀಕ್ಷಿಸಿದ್ದಷ್ಟೇ ಗೊತ್ತು. ಮತ್ತ್ತೆ ಎಚ್ಚರವಾದಾಗ ಮೈಮೇಲೆ ಒಂದಷ್ಟು ಹೆಚ್ಚಿನ ಬಟ್ಟೆಗಳಿದ್ದದ್ದೂ, ಬೇರೆಯವರು ಮಾತನಾಡುತ್ತಿದ್ದ ಕಿರುದನಿ ಕೇಳಿ ಬಂತು. ಕಣ್ಣು ಬಿಡುತ್ತಿದ್ದಂತೆ ಕಂಡಿದ್ದು ಎದ್ದು ಕುಳಿತಿದ್ದ ಪವಿತ್ರಾ, ರವಿ ಮತ್ತು ಅರವಿಂದ. ನಾನು ಎಚ್ಚರವಾದಂತೆ, ನಾವೇನೋನೋ ಕೇಳಿದ್ವಿ ಕೇಳಿಸ್ಲಿಲ್ವೇನೋ? ನೋಡಿಲ್ಲಿ ಸಿಕ್ಕಾ ಪಟ್ಟೆ ನಡುಗ್ತಿದ್ದೆ ಅಂತ ಇದನ್ನೆಲ್ಲಾ ಹೊದಿಸಿದ್ದೇವೆ ಅಂದಾಗ ಹೋ! ಎಂದದ್ದಷ್ಟೇ ಗೊತ್ತು.. ಮತ್ತೆ ಸ್ವಲ್ಪ ಎದ್ದು ಕೂತೆ.
Continue reading about ಪಶ್ಚಿಮಘಟ್ಟದ ಸುತ್ತ ಚಾರಣದ ಎರಡು ದಿನ – ಕೊನೆಯ ಭಾಗ
ಭಾನುವಾರ ಬೆಳಗ್ಗೆ ರವೀಂದ್ರ ಕಲಾಕ್ಷೇತ್ರ ತುಂಬಿತುಳುಕಿತ್ತು.. ತಲುಪುವ ವೇಳೆಗಾಗಲೆ ಇನ್ನೇನು ಖುರ್ಚಿಗಳೇ ಸಿಗುವುದಿಲ್ಲವೇನೋ ಎಂದು ಕೊರಗುತ್ತಲೇ ಒಳನೆಡೆದರೂ ಎಲ್ಲರಿಗೂ ಸುಲಭವಾಗಿ ಕೂಡಲು ಸಾಧ್ಯವಾಯಿತು. ಬಿ.ಸುರೇಶ್, ಮುಖ್ಯಮಂತ್ರಿ ಚಂದ್ರು ಇತರರು ಸುತ್ತಮುತ್ತಲಿದ್ದುದು ಕಂಡು ಬಂತು. ಕಾರ್ಯಕ್ರಮ ಶುರುವಾಗುತ್ತಲಿತ್ತು.









Recent Responses